ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
Cross references
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.
ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.
ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;