Home Bibles ಯೆಶಾಯ 2:4 · ಕನ್ನಡ ಬೈಬಲ್
ಯೆಶಾಯ 2:4 · ಕನ್ನಡ ಬೈಬಲ್

ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.

Cross references

1 ಸಮುವೇಲ 2:10

ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.

ಕೀರ್ತನೆಗಳು 46:9

ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.

ಕೀರ್ತನೆಗಳು 46:10

ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

ಕೀರ್ತನೆಗಳು 72:3

ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.

ಕೀರ್ತನೆಗಳು 82:8

ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.

ಕೀರ್ತನೆಗಳು 96:13

ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

ಕೀರ್ತನೆಗಳು 110:6

ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.

ಯೆಶಾಯ 9:5

ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 11:3

ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;

ಯೆಶಾಯ 11:4

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಯೆಶಾಯ 11:6

ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.

ಯೆಶಾಯ 32:18

ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಯೆಶಾಯ 42:1

ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಯೆಶಾಯ 42:3

ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.

ಯೆಶಾಯ 60:17

ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.

ಹೊಶೇಯ 2:18

ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.

ಹೊಶೇಯ 2:20

ನಾನು ನಿನ್ನನ್ನು ನಂಬಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು; ಆಗ ನೀನು ಕರ್ತನನ್ನು ತಿಳಿದುಕೊಳ್ಳುವಿ.

ಯೋವೇಲ 3:10

ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ.

ಮೀಕ 4:3

ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು.

ಜೆಕರ್ಯ 9:10

ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

ಯೋಹಾನ 16:8

ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ

ಅಪೋಸ್ತಲರ ಕೃತ್ಯಗಳು 17:31

ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Interlinear

Choose Theme