Cross references
ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ.
ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.