ಆದದರಿಂದ ಯಾಕೋಬಿನ ಮನೆತನದವರು ಮೂಡಣ ದೇಶ ಗಳಲ್ಲಿ ಮಗ್ನರಾಗಿ ಫಿಲಿಷ್ಟಿಯರಂತೆ ಕಣಿ ಹೇಳುವವ ರಾಗಿಯೂ ಅನ್ಯ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆ ಯುಳ್ಳವರಾಗಿಯೂ ಇರುವದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀ.
Cross references
ಮಾಟಗಾರ್ತಿಯನ್ನು ಬದುಕ ಗೊಡಿಸಬಾರದು.
ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು.
ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
ನನ್ನ ಮಗನೇ, ನಿನ್ನ ಸ್ನೇಹಿತನಿಗಾಗಿ ನೀನು ಹೊಣೆಯಾಗಿದ್ದರೆ ಪರನೊಂದಿಗೆ ನಿನ್ನ ಕೈಯನ್ನು ಒಡ್ಡಿದ್ದರೆ
ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;