ಅವರ ದೇಶವು ಬೆಳ್ಳಿ ಬಂಗಾರಗ ಳಿಂದಲೂ ತುಂಬಿದೆ, ಅವರ ಬೊಕ್ಕಸಗಳಿಗೆ ಮಿತಿ ಯಿಲ್ಲ; ಅವರ ದೇಶವು ಕುದುರೆಗಳಿಂದಲೂ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.
Cross references
ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.
ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹೀಗೆಯೇ ಅಪ ರಂಜಿಯವುಗಳು. ಬೆಳ್ಳಿಯದು ಒಂದೂ ಇರಲಿಲ್ಲ. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.
ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ