ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
Cross references
ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.
ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.