ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
Cross references
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.