ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
Cross references
ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು.
ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.
ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್ ಸೀಮೆ ಯಲ್ಲಿರುವ ಶೂಷನ್ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.