ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
Cross references
ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಮೋವಾಬು ನಾಶವಾಯಿತು; ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.
ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
ಕಿತ್ತೀಮಿನ ಹಡಗು ಗಳು ಅವನಿಗೆ ವಿರೋಧವಾಗಿ ಬರುವವು. ಆದದರಿಂದ ಅವನು ಎದೆಗುಂದಿ ಪರಿಶುದ್ಧ ಒಡಂಬಡಿಕೆಗೆ ವಿರೋಧ ವಾಗಿ ಅವನು ಕೋಪಿಸಿ ಹೀಗೆ ಮಾಡುವನು. ಹಿಂತಿರುಗಿ ಸೇರಿ ಪರಿಶುದ್ಧ ಒಡಂಬಡಿಕೆಯನ್ನು ತೊರೆದವನ ಸಂಗಡ ಜ್ಞಾನಿಯಾಗುವನು.
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.