ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
Cross references
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
ದಯಮಾಡಿ ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ಜ್ಞಾಪಕಮಾಡು, ಏನಂದರೆ--ನೀವು ಅಕೃತ್ಯ ಮಾಡಿದರೆ ನಾನು ನಿಮ್ಮನ್ನು ಜನಾಂಗಗಳನ್ನು ಚದರಿಸುವಂತೆ ಚದರಿಸುವೆನು.
ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಕರ್ತನು ನಿನ್ನ ಮೇಲೆ ಯೂ ನಿನ್ನ ಜನರ ಮೇಲೆಯೂ ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾ ಯಾಮು ಅಗಲಿದಂದಿನಿಂದ ಅಂದರೆ ಅಶ್ಯೂರ ಅರ ಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವನು.
ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.
ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.
ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.