ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
Cross references
ಆದದರಿಂದ ಅದಕ್ಕೆ ಬಾಬೆಲ್ ಎಂದು ಹೆಸರಾಯಿತು; ಯಾಕಂದರೆ ಅಲ್ಲಿ ಕರ್ತನು ಭೂಮಿಯ ಮೇಲೆಲ್ಲಾ ಭಾಷೆಗಳನ್ನು ಗಲಿಬಿಲಿ ಮಾಡಿದನು; ಅಲ್ಲಿಂದ ಕರ್ತನು ಅವರನ್ನು ಭೂಮಿಯ ಮೇಲೆಲ್ಲಾ ಚದರಿಸಿಬಿಟ್ಟನು.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.