ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
Cross references
ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.