ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
Cross references
ತರುವಾಯ ಬರಗಾಲವು ಮಹಾಕಠಿಣವಾಗಿರು ವದರಿಂದ ಸುಭಿಕ್ಷೆಯ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವದು.
ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ನನ್ನ ಆಯುಷ್ಯ ಮುಗಿಯಿತು ಮತ್ತು ಕುರುಬನ ಗುಡಾರದಂತೆ ನನ್ನಿಂದ ತೆಗೆದುಹಾಕಲ್ಪಟ್ಟಿದೆ; ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೇಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು.
ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.