ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
Cross references
ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.
ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.