Home Bibles ಯೆಶಾಯ 26:10 · ಕನ್ನಡ ಬೈಬಲ್
ಯೆಶಾಯ 26:10 · ಕನ್ನಡ ಬೈಬಲ್

ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.

Cross references

ನಿರ್ಗಮಕಾಂಡ 8:15

ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.

ನಿರ್ಗಮಕಾಂಡ 8:31

ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.

ನಿರ್ಗಮಕಾಂಡ 9:34

ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್‌ ಮಕ್ಕಳನ್ನು ಕಳುಹಿಸಲೇ ಇಲ್ಲ.

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

1 ಸಮುವೇಲ 15:17

ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್‌ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?

2 ಅರಸುಗಳು 13:6

ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.

ಕೀರ್ತನೆಗಳು 28:4

ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.

ಕೀರ್ತನೆಗಳು 78:54

ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.

ಕೀರ್ತನೆಗಳು 106:43

ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.

ಕೀರ್ತನೆಗಳು 143:10

ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.

ಸಾಮೇತಿಗಳು 1:32

ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.

ಸಭಾಪ್ರಸಂಗಿ 3:16

ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.

ಸಭಾಪ್ರಸಂಗಿ 8:11

ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.

ಯೆಶಾಯ 1:21

ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.

ಯೆಶಾಯ 2:10

ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.

ಯೆಶಾಯ 5:12

ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.

ಯೆಶಾಯ 22:12

ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.

ಯೆಶಾಯ 24:5

ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.

ಯೆಶಾಯ 27:13

ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆಶಾಯ 32:6

ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

ಯೆಶಾಯ 63:9

ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

ಯೆರೆಮಿಯ 2:7

ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.

ಯೆರೆಮಿಯ 31:23

ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.

ಯೆಹೆಜ್ಕೇಲ 22:2

ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.

ಹೊಶೇಯ 9:3

ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

ಹೊಶೇಯ 11:7

ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

ಹೊಶೇಯ 13:6

ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.

ಮೀಕ 2:10

ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.

ಮೀಕ 3:10

ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.

ಮತ್ತಾಯ 4:5

ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--

ಯೋಹಾನ 5:37

ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ಪ್ರಕಟನೆ 2:21

ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

Interlinear

Choose Theme