ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
Cross references
ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
ಆದಾಗ್ಯೂ ಅವರು ನನ್ನ ಸೇವೆಯನ್ನೂ ದೇಶಗಳ ಅರಸುಗಳ ಸೇವೆಯನ್ನೂ ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.
ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.