ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
Cross references
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು--
ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
ಮನುಷ್ಯ ಪುತ್ರನೇ, ಐಗುಪ್ತ ಅರಸನಾದ ಫರೋಹನ ವಿಷಯ ವಾಗಿ ಗೋಳಾಟವನ್ನೆತ್ತಿ ಅವನಿಗೆ ನೀನು ಹೇಳಬೇಕಾ ದದ್ದೇನಂದರೆ--ನೀನು ಜನಾಂಗಗಳಲ್ಲಿ ಪ್ರಾಯದ ಸಿಂಹಕ್ಕೆ ಸಮನಾಗಿರುವೆ; ಸಮುದ್ರಗಳಲ್ಲಿರುವ ತಿಮಿಂಗಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇಧಿಸಿಕೊಂಡು ಬಂದ ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಗೆ ಮಾಡಿದೆ.
ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.