ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ?
Cross references
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
ಓ ರಾಜನೇ, ನೀನು ನೋಡಲಾಗಿ, ಇಗೋ, ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನ ವಾದ ಈ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು; ಅದರ ಆಕಾರವು ಭಯಂಕರವಾಗಿತ್ತು.
ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.
ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?