ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.
Cross references
ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.