Home Bibles ಯೆಶಾಯ 28:15 · ಕನ್ನಡ ಬೈಬಲ್
ಯೆಶಾಯ 28:15 · ಕನ್ನಡ ಬೈಬಲ್

ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?

Cross references

ಆದಿಕಾಂಡ 37:20

ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಯೋಬ 5:23

ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.

ಯೋಬ 15:25

ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.

ಸಭಾಪ್ರಸಂಗಿ 8:8

ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.

ಯೆಶಾಯ 5:18

ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --

ಯೆಶಾಯ 8:7

ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ

ಯೆಶಾಯ 8:8

ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.

ಯೆಶಾಯ 9:15

ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.

ಯೆಶಾಯ 28:2

ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.

ಯೆಶಾಯ 28:18

ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.

ಯೆಶಾಯ 29:15

ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!

ಯೆಶಾಯ 30:10

ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.

ಯೆಶಾಯ 30:12

ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--

ಯೆಶಾಯ 30:28

ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.

ಯೆರೆಮಿಯ 5:12

ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 14:13

ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.

ಯೆರೆಮಿಯ 16:19

ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು

ಯೆರೆಮಿಯ 28:15

ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ

ಯೆಹೆಜ್ಕೇಲ 8:12

ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.

ಯೆಹೆಜ್ಕೇಲ 13:16

ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 13:22

ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.

ಯೆಹೆಜ್ಕೇಲ 22:28

ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.

ದಾನಿಯೇಲ 9:27

ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ದಾನಿಯೇಲ 11:22

ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.

ಹೊಶೇಯ 2:18

ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.

ಆಮೋಸ 2:4

ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.

ಯೋನ 2:8

ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

ಸೆಫನ್ಯ 1:12

ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.

2 ತೆಸಲೋನಿಕದವರಿಗೆ 2:9

ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ

Interlinear

Choose Theme