ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
Cross references
ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
ದೇವ ರಿಗೆ ವಿರೋಧವಾಗಿ ತನ್ನ ಕೈಚಾಚಿ, ಸರ್ವಶಕ್ತನಿಗೆ ವಿರೋಧವಾಗಿ ಬಲಗೊಂಡಿದ್ದಾನೆ.
ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ