ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
Cross references
ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಇಗೋ, ಕರ್ತನಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ಹೊಡೆದುಬಿಡುವ ಬಿರುಗಾಳಿ ಯಂತೆಯೂ ಪ್ರಳಯಮಾಡುವ ಪ್ರಚಂಡ ಮಳೆ ಯನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈ ಯಿಂದ ನೆಲಕ್ಕೆ ಬೀಳಿಸುವನು.
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ಪ್ರವಾಹದಂತಿರುವ ಆ ವ್ಯೂಹಗಳೂ ಒಡಂಬಡಿಕೆಯ ಪ್ರಧಾನನೂ ಅವನ ರಭಸಕ್ಕೆ ಸಿಕ್ಕಿ ಒಡೆದುಕೊಂಡು ಹೋಗಿ ಮುರಿದು ಹೋಗುವರು.
ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು.
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
ಆದರೆ ಅಂಥವುಗಳನ್ನು ಮಾಡುವವರ ಮೇಲೆ ಸತ್ಯಕ್ಕನುಸಾರವಾಗಿ ದೇವರ ನ್ಯಾಯತೀರ್ಪು ಇದೆಯೆಂದು ನಮಗೆ ನಿಶ್ಚಯವುಂಟು.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.