ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
Cross references
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು.
ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.
ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವದೋ? ನಿನ್ನ ಕೈಗಳು ಬಲವಾಗಿರುವವೋ? ಕರ್ತನಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುತ್ತೇನೆ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮ್ಮ ಮೇಲೆ ಬಾರದಂತೆ ಎಚ್ಚರಿಕೆಯಾಗಿರ್ರಿ.
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.