ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
Cross references
ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಎಫ್ರಾಯಾಮು ನಡುಗುತ್ತಾ ಮಾತನಾಡಿದಾಗ ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು; ಆದರೆ ಬಾಳನ ವಿಷಯದಲ್ಲಿ ಅವನು ಅಪರಾಧಿಯಾದ ಮೇಲೆ ಸತ್ತನು.
ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು.