ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಯಾರಿಗೆ ಬೋಧನೆಯನ್ನು ತಿಳುಕೊಳ್ಳುವ ಹಾಗೆ ಮಾಡುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ? ಎದೆ ಬಿಟ್ಟ ಮಕ್ಕಳಿಗೋ?
Cross references
ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಕರ್ತನು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ ಇನ್ನೂ ನಿಮ್ಮ ಬೋಧಕರು ತಮ್ಮನ್ನು ಮರೆಮಾಡಿಕೊಳ್ಳುವದಿಲ್ಲ. ಆದರೆ ನಿಮ್ಮ ಕಣ್ಣುಗಳು ನಿಮ್ಮ ಬೋಧಕನನ್ನು ನೋಡು ತ್ತಿರುವವು.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.