ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Cross references
ಹಿಜ್ಕೀಯನು ಆಳಲಾರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಇಪ್ಪತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬೀಯಳು; ಇವಳು ಜೆಕರೀಯನ ಮಗಳಾಗಿದ್ದಳು.
ಓ ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ.
ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
(ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.