ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ!
Cross references
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.
ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ.
ಕರ್ತನು ನೋಡುವದಿಲ್ಲ; ಇಲ್ಲವೆ ಯಾಕೋಬನ ದೇವರು ಲಕ್ಷಿಸುವದಿಲ್ಲ ಅನ್ನುತ್ತಾರೆ.
ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;
ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.