ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
Cross references
ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.