ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
Cross references
ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಪಡಿಸಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ--ಆರು ದಿವಸಗಳಲ್ಲಿ ಮನು ಷ್ಯರು ಕೆಲಸ ಮಾಡತಕ್ಕದ್ದು. ಆದದರಿಂದ ಅವುಗಳಲ್ಲಿ ಅವರು ಬಂದು ಸ್ವಸ್ಥತೆ ಹೊಂದಲಿ; ಸಬ್ಬತ್ ದಿನದಲ್ಲಿ ಬೇಡ ಅಂದನು.
ಆಗ ಲೋಭಿ ಗಳಾದ ಫರಿಸಾಯರು ಸಹ ಇವೆಲ್ಲವುಗಳನ್ನು ಕೇಳಿ ಆತನಿಗೆ ಪರಿಹಾಸ್ಯ ಮಾಡಿದರು.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.