Home Bibles ಯೆಶಾಯ 3:1 · ಕನ್ನಡ ಬೈಬಲ್
ಯೆಶಾಯ 3:1 · ಕನ್ನಡ ಬೈಬಲ್

ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

Cross references

ಲೇವ್ಯಕಾಂಡ 26:26

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

2 ಅರಸುಗಳು 25:3

ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.

ಕೀರ್ತನೆಗಳು 105:16

ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.

ಯೆಶಾಯ 1:24

ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.

ಯೆಶಾಯ 2:22

ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?

ಯೆಶಾಯ 5:13

ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.

ಯೆಶಾಯ 36:12

ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.

ಯೆಶಾಯ 51:22

ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.

ಯೆರೆಮಿಯ 37:21

ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--

ಯೆರೆಮಿಯ 38:9

ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.

ಯೆಹೆಜ್ಕೇಲ 4:16

ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.

ಯೆಹೆಜ್ಕೇಲ 14:13

ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,

Interlinear

Choose Theme