ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
Cross references
ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
ದೇವರ ಬಳಿಗೆ ನ್ಯಾಯಕ್ಕೆ ಬರುವ ಹಾಗೆ, ಮನುಷ್ಯನ ಮೇಲೆ ಆತನು ಹೆಚ್ಚು ಗಮನವಿಡುವದಿಲ್ಲ.
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?