ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
Cross references
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?
ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
ಆದರೆ ಅವರು ಪ್ರವಾದಿಗಳಾಗಿದ್ದರೆ, ದೇವರ ವಾಕ್ಯವು ಅವರ ಸಂಗಡ ಇದ್ದರೆ ಕರ್ತನ ಆಲಯದಲ್ಲಿಯೂ ಯೆಹೂ ದದ ಅರಸನ ಮನೆಯಲ್ಲಿಯೂ ಯೆರೂಸಲೇಮಿ ನಲ್ಲಿಯೂ ಉಳಿದ ಪಾತ್ರೆಗಳು ಬಾಬೆಲಿಗೆ ಹೋಗದ ಹಾಗೆ ಅವರು ಸೈನ್ಯಗಳ ಕರ್ತನಿಗೆ ವಿಜ್ಞಾಪನೆ ಮಾಡಲಿ.
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಯಿತು; ನಮಗೆ ಅಯ್ಯೋ, ನಾವು ಪಾಪಮಾಡಿದ್ದೇವೆ.
ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು.
ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.