ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
Cross references
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
ಆಗ ಇಸ್ರಾಯೇ ಲಿನ ಅರಸನು ಯೊಹೋಷಾಫಾಟನಿಗೆ -- ನಾವು ಕರ್ತನಿಂದ ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬವನು ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ; ಕೆಟ್ಟದ್ದನ್ನೇ, ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಅನ್ನದಿರಲಿ ಅಂದನು.
ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
ತಕ್ಕೊಂಡು ಹೋಗದಂಥ ಸ್ಥಂಭಗಳನ್ನು ಕುರಿತು ಸಮುದ್ರವನ್ನು ಕುರಿತು ಗದ್ದಿಗೆ ಗಳನ್ನು ಕುರಿತು ಈ ಪಟ್ಟಣದಲ್ಲಿ ಉಳಿದ ಬೇರೆ ಪಾತ್ರೆ ಗಳನ್ನು ಕುರಿತು ಸೈನ್ಯಗಳ ಕರ್ತನು ಹೇಳುವದೇನಂದರೆ--
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳು ವದರಿಂದ ನಿಮಗೆ ಶತ್ರುವಾಗಿದ್ದೇನೋ?
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.