ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
Cross references
ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಒಂದು ಮಾತಿನ ನಿಮಿತ್ತ ಮನುಷ್ಯರಿಗೆ ತಪ್ಪು ಹೊರಿಸುವವರೂ ಬಾಗಲಲ್ಲಿ ವಾದಿಸುವವನಿಗೆ ಉರ್ಲು ಒಡ್ಡುವವರೂ ಏನೂ ಇಲ್ಲದೆ ಕಾರ್ಯಕ್ಕೆ ನೀತಿವಂತನನ್ನು ತಿರುಗಿಸುವವರೂ ನಿರ್ನಾಮವಾಗುವರು.
ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.