Home Bibles ಯೆಶಾಯ 30:15 · ಕನ್ನಡ ಬೈಬಲ್
ಯೆಶಾಯ 30:15 · ಕನ್ನಡ ಬೈಬಲ್

ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

Cross references

ನಿರ್ಗಮಕಾಂಡ 14:14

ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.

1 ದಿನವೃತ್ತಾಂತ 5:20

ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

2 ದಿನವೃತ್ತಾಂತ 16:8

ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.

2 ದಿನವೃತ್ತಾಂತ 32:8

ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.

ಕೀರ್ತನೆಗಳು 80:11

ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.

ಕೀರ್ತನೆಗಳು 125:1

ಕರ್ತನಲ್ಲಿ ಭರವಸವಿಡುವವರು ಚೀಯೋನ್‌ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.

ಯೆಶಾಯ 7:4

ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಯೆಶಾಯ 26:3

ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.

ಯೆಶಾಯ 30:7

ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.

ಯೆಶಾಯ 30:11

ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.

ಯೆಶಾಯ 32:17

ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.

ಯೆಶಾಯ 40:31

ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

ಯೆರೆಮಿಯ 3:22

ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.

ಹೊಶೇಯ 14:1

ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;

ಮತ್ತಾಯ 22:3

ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

ಮತ್ತಾಯ 23:37

ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

ಲೂಕ 13:34

ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

ಯೋಹಾನ 5:40

ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.

ಹೆಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

Interlinear

Choose Theme