ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
Cross references
ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.