ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
Cross references
ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ.
ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
ಕಾರ್ಯವನ್ನು ಜ್ಞಾನದಿಂದ ನಡಿಸುವವನು ಒಳ್ಳೇದನ್ನು ಪಡೆಯುವನು; ಕರ್ತನಲ್ಲಿ ಭರವಸವಿಡುವವನು ಧನ್ಯನು.
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ನೀತಿವಂತನ ಮಾರ್ಗವು ಯಥಾರ್ಥವಾಗಿದೆ. ನೀನು ಅತ್ಯಧಿಕ ವಾದ ಯಥಾರ್ಥವಂತನು; ನೀತಿವಂತನ ದಾರಿಯನ್ನು ತೂಗಿ ನೋಡುತ್ತೀ;
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ಕರ್ತನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಿನ ಲೋಕ ದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗ ಳಿಂದ ತುಂಬಿಸಿದ್ದಾನೆ.
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವದಕ್ಕೂ ಕೆಡವುವ ದಕ್ಕೂ ನಾಶಮಾಡುವದಕ್ಕೂ ಮಾತಾಡುತ್ತೇನೋ
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು.