ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
Cross references
ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
ಆದರೆ ಆ ದೇಶವು ಸುಭಿಕ್ಷೆಯ ಏಳು ವರುಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.
ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.
ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.
ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆ ದಿನಗಳಲ್ಲಿ ಆಗುವದೇನಂದರೆ--ನಾನು ಕೇಳು ವೆನೆಂದು ಕರ್ತನು ಹೇಳುತ್ತಾನೆ; ನಾನು ಆಕಾಶಗ ಳನ್ನು ಕೇಳುವೆನು; ಅವು ಭೂಮಿಯನ್ನು ಕೇಳು ವವು.
ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.
ಓ ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.