ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.
Cross references
ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ
ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ
ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು.
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.