ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
Cross references
ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ.
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ ಕೋಪದಿಂದ ಅನ್ಯಜನಾಂಗಗಳನ್ನು ತುಳಿದುಹಾಕಿದ್ದೀ.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.