ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Cross references
ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಬಂದಿ? ನೀನು ನನಗೆ ಯಾಕೆ ತಿಳಿಸಲಿಲ್ಲ? ತಿಳಿಸಿದ್ದರೆ ಸಂತೋಷದಿಂದ ಹಾಡು ತಾಳ ವೀಣೆಗಳ ಸಂಗಡ ನಿನ್ನನ್ನು ಕಳುಹಿಸುತ್ತಿದ್ದೆನು.
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು;
ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ.
ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಹೇಗೋ ಹಾಗೆ ನಿಮಗೆ ಹಾಡುವಿರಿ; ಕರ್ತನ ಪರ್ವತಕ್ಕೆ ಇಸ್ರಾಯೇಲಿನ ಬಂಡೆಯ ಬಳಿಗೆ ಬರುವದಕ್ಕೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವದು.
ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.