ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
Cross references
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ನಿನ್ನ ದೇವರಾದ ಕರ್ತನು ದಹಿಸುವ ಅಗ್ನಿಯೂ ರೋಷವುಳ್ಳ ದೇವರೂ ಆಗಿದ್ದಾನೆ.
ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.
ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.