Home Bibles ಯೆಶಾಯ 30:7 · ಕನ್ನಡ ಬೈಬಲ್
ಯೆಶಾಯ 30:7 · ಕನ್ನಡ ಬೈಬಲ್

ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.

Cross references

ನಿರ್ಗಮಕಾಂಡ 14:13

ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

ಕೀರ್ತನೆಗಳು 76:8

ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.

ಕೀರ್ತನೆಗಳು 118:8

ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು.

ಸಾಮೇತಿಗಳು 25:19

ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.

ಯೆಶಾಯ 2:22

ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?

ಯೆಶಾಯ 7:4

ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಯೆಶಾಯ 28:12

ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.

ಯೆಶಾಯ 30:15

ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

ಯೆಶಾಯ 31:1

ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

ಯೆಶಾಯ 31:2

ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.

ಯೆಶಾಯ 31:3

ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.

ಯೆಶಾಯ 51:9

ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?

ಯೆರೆಮಿಯ 37:7

ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,

ವಿಲಾಪಗಳು 3:26

ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.

ಹೊಶೇಯ 5:13

ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.

Interlinear

Choose Theme