ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.
Cross references
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.