Home Bibles ಯೆಶಾಯ 30:9 · ಕನ್ನಡ ಬೈಬಲ್
ಯೆಶಾಯ 30:9 · ಕನ್ನಡ ಬೈಬಲ್

ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.

Cross references

ದ್ವಿತೀಯೋಪದೇಶಕಾಂಡ 31:27

ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

ದ್ವಿತೀಯೋಪದೇಶಕಾಂಡ 32:20

ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.

2 ದಿನವೃತ್ತಾಂತ 33:10

ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.

2 ದಿನವೃತ್ತಾಂತ 36:15

ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

ನೆಹೆಮ್ಯ 9:29

ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

ಕೀರ್ತನೆಗಳು 81:12

ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.

ಸಾಮೇತಿಗಳು 28:9

ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.

ಯೆಶಾಯ 1:4

ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.

ಯೆಶಾಯ 1:10

ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.

ಯೆಶಾಯ 5:24

ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.

ಯೆಶಾಯ 10:5

ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.

ಯೆಶಾಯ 10:6

ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

ಯೆಶಾಯ 28:15

ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?

ಯೆಶಾಯ 30:1

ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಯೆಶಾಯ 48:4

ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

ಯೆಶಾಯ 59:3

ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.

ಯೆಶಾಯ 63:8

ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.

ಯೆರೆಮಿಯ 7:13

ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

ಯೆರೆಮಿಯ 9:3

ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ

ಯೆರೆಮಿಯ 44:2

ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ!

ಹೊಶೇಯ 4:2

ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

ಸೆಫನ್ಯ 3:2

ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.

ಜೆಕರ್ಯ 1:4

ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.

ಜೆಕರ್ಯ 7:11

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ಮತ್ತಾಯ 23:31

ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಅಪೋಸ್ತಲರ ಕೃತ್ಯಗಳು 7:51

ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

ರೋಮಾಪುರದವರಿಗೆ 2:21

ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?

ಪ್ರಕಟನೆ 21:8

ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಪ್ರಕಟನೆ 22:15

ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

Interlinear

Choose Theme