ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
Cross references
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.
ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.