ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
Cross references
ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.
ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ.
ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.