ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
Cross references
ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.