Home Bibles ಯೆಶಾಯ 32:2 · ಕನ್ನಡ ಬೈಬಲ್
ಯೆಶಾಯ 32:2 · ಕನ್ನಡ ಬೈಬಲ್

ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

Cross references

ಕೀರ್ತನೆಗಳು 31:2

ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.

ಕೀರ್ತನೆಗಳು 32:7

ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.

ಕೀರ್ತನೆಗಳು 63:1

ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.

ಕೀರ್ತನೆಗಳು 143:9

ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.

ಕೀರ್ತನೆಗಳು 146:3

ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;

ಯೆಶಾಯ 4:5

ಕರ್ತನು ಚೀಯೋನ್‌ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

ಯೆಶಾಯ 4:6

ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

ಯೆಶಾಯ 7:14

ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.

ಯೆಶಾಯ 8:10

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 25:4

ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.

ಯೆಶಾಯ 26:20

ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

ಯೆಶಾಯ 28:17

ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು.

ಯೆಶಾಯ 32:18

ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಯೆಶಾಯ 35:6

ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.

ಯೆಶಾಯ 41:18

ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.

ಯೆಶಾಯ 43:20

ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

ಯೆಶಾಯ 44:3

ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.

ವಿಲಾಪಗಳು 4:20

ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.

ಮೀಕ 5:4

ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.

ಜೆಕರ್ಯ 13:7

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ಮತ್ತಾಯ 7:24

ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

ಯೋಹಾನ 7:37

ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

1 ತಿಮೋಥೆಯ 3:16

ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

ಪ್ರಕಟನೆ 22:1

ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.

Interlinear

Choose Theme