ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
Cross references
ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ಚದುರಿಸಿದಾಗ್ಯೂ ವೃದ್ಧಿಯಾಗುತ್ತದೆ; ಬೇಕಾದದ್ದಕ್ಕಿಂತ ಹೆಚ್ಚಿನದನ್ನು ಬಿಗಿಹಿಡಿಯುವಂಥದ್ದು ಬಡತನಕ್ಕೆ ನಡಿಸುತ್ತದೆ.
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.